ಹಿಜಾಬ್ ತೀರ್ಪು ಕುರಿತು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಕೊಲೆ ಬೆದರಿಕೆ, ದೂರು ದಾಖಲು

ತನಗೆ ವಾಟ್ಸಾಪ್‌ನಲ್ಲಿ ವೀಡಿಯೋ ಬಂದಿದ್ದು, ಜಾರ್ಖಂಡ್ ನ್ಯಾಯಾಧೀಶರೊಬ್ಬರನ್ನು ಬೆಳಗಿನ ವಾಕ್ ಮಾಡುತ್ತಿದ್ದಾಗ ಹತ್ಯೆಗೈದ ಆರೋಪದ ಮೇರೆಗೆ ಮುಖ್ಯ ನ್ಯಾಯಮೂರ್ತಿ ಅವಸ್ತಿ ಅವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕುತ್ತಿರುವುದನ್ನು ಕಾಣಬಹುದು ಎಂದು ದೂರುದಾರರು ಹೇಳಿದ್ದಾರೆ.

Karnataka High Court Chief Justice Ritu Raj Awasthi

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿರುವ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ಇತರರಿಗೆ ವ್ಯಕ್ತಿಯೊಬ್ಬರು ಕೊಲೆ ಬೆದರಿಕೆ ಹಾಕುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸಂಬಂಧ ವಕೀಲ ಉಮಾಪತಿ ಎಸ್ ಅವರು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್‌ಗೆ ಶನಿವಾರ ದೂರು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *